ಉದಯಪುರ ಹಿಂದು ಹತ್ಯೆ: ಎನ್‌ಐಎ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ನಡೆದ ಕನ್ಹಯ್ಯಾ ಹತ್ಯೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣದಲ್ಲಿ ಉಗ್ರಗಾಮಿ ಸಂಘಟನೆಗಳು ಭಾಗಿಯಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ತನಿಖೆಯ ಜವಾಬ್ದಾರಿಯನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಿದೆ.

ಘಟನೆ ನಡೆದ ಬಳಿಕ ರಾಜಸ್ಥಾನದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಉದಯಪುರದಲ್ಲಿ ಒಂದು ತಿಂಗಳ ಕಾಲ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಗೌಸ್ ಮತ್ತು ಮೊಹಮ್ಮದ್ ರಿಯಾಜ್ ಅವರನ್ನು ಈಗಾಗಲೇ ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಈ ದುಷ್ಟರಿಗೆ ಭಯೋತ್ಪಾದಕ ಸಂಘಟನೆ ಹಾಗೂ ಅಂತರಾಷ್ಟ್ರೀಯ ಸಂಬಂಧದ ಬಗ್ಗೆ  ಎನ್‌ಐಎ ಸಮಗ್ರ ತನಿಖೆ ನಡೆಸಲಿದೆ ಎಂದು ಗೃಹ ಸಚಿವಾಲಯ ಟ್ವೀಟ್ ಮೂಲಕ ತಿಳಿಸಿದೆ.

ಇಬ್ಬರು ಆರೋಪಿಗಳು ಸ್ಲೀಪರ್ ಸೆಲ್‌ಗಳು ಎಂದು ನಂಬಲಾಗಿದೆ. ಈ ಮಧ್ಯೆ, ಹತ್ಯೆಗೀಡಾದ ಕನ್ಹಯ್ಯನ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಬಹಿರಂಗವಾಗಿದ್ದು, ವರದಿಯ ಪ್ರಕಾರ, ಕನ್ಹಯ್ಯ ಅವರ ಕುತ್ತಿಗೆಯಲ್ಲಿ 26 ಇರಿತ ಗಾಯಗಳಾಗಿದ್ದು, ಅತಿಯಾದ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿದೆ.

ಕನ್ಹಯ್ಯ ಕೊಲೆಗೆ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಸಮಾಜಿಕ ಜಾಲತಾಣಗಳಲ್ಲಿ ಜಸ್ಟೀಸ್ ಫಾರ್ ಕನ್ಹಯ್ಯ ಲಾಲ್ ಅಭಿಯಾನ ಶುರುವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!