ಉದಯಪುರ ಹಿಂದು ಹತ್ಯೆ ಘಟನೆ ನನ್ನನ್ನು ಬೆಚ್ಚಿಬೀಳಿಸಿದೆ: ಹರ್ಭಜನ್ ಸಿಂಗ್‌ ಖಂಡನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನದ ಉದಯಪುರದಲ್ಲಿ ನಡೆದ ಹತ್ಯೆಯನ್ನು ರಾಜ್ಯಸಭಾ ಸದಸ್ಯ, ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಉದಯಪುರದಲ್ಲಿ ನಡೆದ ಭಯಾನಕ ಘಟನೆ ನನ್ನನ್ನು ಬೆಚ್ಚಿಬೀಳಿಸಿದೆ’ ಎಂದು ತಿಳಿಸಿದ್ದಾರೆ.
ಯಾವುದೇ ಸುಸಂಸ್ಕೃತ ಸಮಾಜದಲ್ಲಿ ನಡೆಯಬಾರದ ಘೋರ ಅಪರಾಧವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅಪರಾಧ ಎಸಗಿದವರ ವಿರುದ್ಧ ಕಠಿಣ ಮತ್ತು ಶೀಘ್ರ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!