ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಹಾರಾಷ್ಟ್ರ ಮಾಜಿ ಕೈಗಾರಿಕಾ ಸಚಿವ , ಉದ್ಧವ್ ಠಾಕ್ರೆ ಅವರ ಆಪ್ತ ಸುಭಾಷ್ ದೇಸಾಯಿ ಅವರ ಪುತ್ರ ಭೂಷಣ್ ದೇಸಾಯಿ ಅವರು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.
ಹಲವು ವರ್ಷಗಳಿಂದ ಉದ್ಧವ್ ಠಾಕ್ರೆ ಮತ್ತು ಅವರ ಕುಟುಂಬದ ಅತ್ಯಂತ ವಿಶ್ವಾಸಾರ್ಹ ನಾಯಕನಾಗಿದ್ದರು ಸುಭಾಷ್ ದೇಸಾಯಿ.
ಇದೀಗ ಸುಭಾಷ್ ದೇಸಾಯಿ ಪುತ್ರ ಶಿಂಧೆ ಬಣ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ ಶಿವಸೇನೆ(ಯುಬಿಟಿ) ನಾಯಕ ಆದಿತ್ಯ ಠಾಕ್ರೆ, ಭೂಷಣ್ ಉದ್ಧವ್ ಬಣದಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ .