ಹೊಸದಿಗಂತ ವರದಿ, ಮಂಗಳೂರು:
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯ ಗುಮ್ಮಲ ಡ್ಯಾಂನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕುಂದಾಪುರ ತಾಲೂಕಿನ ಬೆಳ್ವೆಯ ಗ್ರಾಮದಲ್ಲಿ ಈಜುಲು ಹೋದ ಇಬ್ಬರು ಬಾಲಕರು ನೀರು ಪಾಲಾಗಿ ಮುಳುಗಿ ಸಾವನ್ನಪ್ಪಿದ್ದದ್ದಾರೆ . ಮೃತರನ್ನು ಶ್ರೀಶ (13) ಹಾಗೂ ಜಯಂತ್ (19) ಎಂದು ತಿಳಿದು ಬಂದಿದೆ.
ರಜೆ ಹಿನ್ನೆಲೆಯಲ್ಲಿ ಗೆಳೆಯರ ಜೊತೆಗೆ ಇಬ್ಬರು ಈಜಲು ಹೋಗಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.