ಉಜ್ಜಯಿನಿ ಮಹಾಕಾಳೇಶ್ವರ ದೇಗುಲದಲ್ಲಿ ಬೆಂಕಿ ಅವಘಡ: ಪ್ರಧಾನಿ ಮೋದಿ ಬೇಸರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆ ಸುದ್ದಿ ತಿಳಿದು ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಉಜ್ಜಯಿನಿಯ ಮಹಾಕಾಳ ದೇಗುಲದಲ್ಲಿ ನಡೆದ ಘಟನೆಯು ನೋವುಂಟು ಮಾಡಿದೆ.ಅವಘಢದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆ ಆಶಿಸುವೆ. ರಾಜ್ಯ ಸರ್ಕಾರದ ಮೇಲುಸ್ತುವಾರಿಯಲ್ಲಿ ಸ್ಥಳೀಯಾಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವುಗಳನ್ನು ನೀಡುವ ಕಾರ್ಯದಲ್ಲಿ ನಿರತವಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಘಟನೆಯಲ್ಲಿ ಗಾಯಗೊಂಡ 14 ಸಂತ್ರಸ್ತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಕರೆ ಮಾಡಿ ಗಾಯಗೊಂಡಿರುವವರ ವಿವರಗಳನ್ನು ಕೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಫೋನ್ ಕರೆ ಮಾಡಿ ವಿಚಾರಿಸಿದ್ದಾರೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.’

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!