ಯುಕೆಪಿ 3 ನೇ ಹಂತದ ಕಾಮಗಾರಿ ಪೂರ್ಣಗೊಳಿಸಲು ಬದ್ದ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ,ಬಾಗಲಕೋಟೆ:

ಯುಕೆಪಿ ೩ ನೇ ಹಂತದ ಕಾಮಗಾರಿ ಪೂರ್ಣಗೊಳಿಸಲು ಬದ್ದನಾಗಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕೆರೂರ ಏತ ನೀರಾವರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಆಲಮಟ್ಟಿ ಜಲಾಶಯವನ್ನು ೫೨೪ಕ್ಕೆ ಎತ್ತರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
೩ನೇ ಹಂತದಲ್ಲಿ ಮುಳಗಡೆಯಾಗುವ ರೈತರ ಜಮೀನುಗಳಿಗೆ ಹಾಗೂ ಮನೆ ಕಳೆದುಕೊಳ್ಳುವ ಸಂತ್ರಸ್ತರಿಗೆ ಯೋಗ್ಯ ಪರಿಹಾರವನ್ನು ನೀಡಲಾಗುವುದು ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ೩ನೇ ಹಂತದ ಕಾಮಗಾರಿ ಪೂರ್ಣಗೊಂಡರೆ ೧೩ ಲಕ್ಷ ಎಕರೆ ಭೂಮಿ ನೀರಾವರಿ ಆಗಲಿದೆ. ಈ ಯೋಜನೆ ಪೂರ್ಣಗೊಂಡಾಗ ಉತ್ತರ ಕರ್ನಾಟಕದ ಭಾಗ್ಯದ ಬಾಗಿಲು ತೆರೆಯಲಿದೆ. ಈ ಯೋಜನೆ ಪೂರ್ಣಗೊಳಿಸಲು ನಮ್ಮ ಬದ್ಧತೆ ಇದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!