ಸಾಂಬ್ರಾ ವಿಮಾನ ನಿಲ್ದಾಣ ತಲುಪಿದ ಉಮೇಶ್‌ ಕತ್ತಿ ಪಾರ್ಥಿವ ಶರೀರ: ಸಕಲ ಸಿದ್ಧತೆ

ಹೊಸದಿಗಂತ ವರದಿ ಬೆಳಗಾವಿ: 

ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಮೃತದೇಹ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆದಿದೆ. ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

ಉಮೇಶ ಕತ್ತಿ ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ಮುಂಜಾನೆಯಿಂದಲೇ ಅಂತಿಮ ಕ್ರಿಯೆಗೆ ಸಕಲ ಸಿದ್ದತೆಗೊಂಡಿದ್ದು, ವಿಶ್ವರಾಜ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನಸ್ತೋಮ ಈಗಾಗಲೇ ಆವರಣದಲ್ಲಿ ಜಮಾವಣೆಗೊಂಡಿದೆ.

4 ಗಂಟೆಯ ಸುಮಾರಿಗೆ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ಉಮೇಶ ಕತ್ತಿ ಅವರ ಮೃತದೇಹ ತಲುಪಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!