ಹೊಸದಿಗಂತ ವರದಿ ಮಂಡ್ಯ :
ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಹೋಬಳಿಯ ದೇವಿಪುರ ಗ್ರಾಮದ ಲೇ.ಚನ್ನಣ್ಣನ ಚೌಡಯ್ಯ ಎಂಬುವವರ ಪತ್ನಿ ರೈತ ಮಹಿಳೆ ಜವನಮ್ಮ(75) ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದಲ್ಲಿ 3 ಎಕರೆ ಜಮೀನು ಹೊಂದಿದ್ದ ಜವನಮ್ಮ ವ್ಯವಸಾಯಕ್ಕಾಗಿ ಸಹಕಾರ ಸಂಘ, ಮಹಿಳಾ ಸ್ವಸಹಾಯ ಸಂಘ, ಖಾಸಗಿ ಬ್ಯಾಂಕ್, ಕೈಸಾಲ ಸೇರಿದಂತೆ ಸುಮಾರು 9 ಲಕ್ಷ ರೂ.ಸಾಲ ಮಾಡಿಕೊಂಡಿದ್ದ ಅವರು ಸಾಲಬಾಧೆ ತಾಳಲಾರದೇ ಗುರುವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.