ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಂತ ಚಿಕ್ಕಪ್ಪನೇ ಅಣ್ಣನ ಮಕ್ಕಳನ್ನು ಕ್ರೂರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದ್ದು, ಇನ್ನೊಬ್ಬ ಬಾಲಕ ಸಾವು ಬದುಕಿನ ನಡುವೆ ಹೋರಾಡುತ್ತಿದೆ.
ಖಾಸೀಂ (35) ಮಕ್ಕಳನ್ನು ಕೊಲೆ ಆರೋಪಿ. ಮಹಮ್ಮದ್ ಇಶಾಕ್ (9) ಮಹಮ್ಮದ್ ಜುನೇದ್ (7) ಹಲ್ಲೆಯಿಂದ ಮೃಪಟ್ಟ ಮಕ್ಕಳು. ಆರೋಪಿ ಸ್ವಂತ ಅಣ್ಣನ ಮೂವರು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾನೆ. ಇಬ್ಬರು ಸಾವನ್ನಪ್ಪಿದ್ರೆ, 5 ವರ್ಷದ ಮಗು (ಮಹಮದ್ ರೋಹನ್) ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ.
ಮನೆಯಲ್ಲಿ ಮಕ್ಕಳನ್ನ ಅಜ್ಜಿಯೊಂದಿಗೆ ಬಿಟ್ಟು ಪೋಷಕರು ಕೆಲಸಕ್ಕೆ ಹೋಗಿದ್ದರು. ಅಜ್ಜಿ ತರಕಾರಿ ತರಲು ಮಾರ್ಕೆಟ್ಗೆ ಹೋಗಿದ್ದ ವೇಳೆ ಮಾನಸಿಕ ಅಸ್ವಸ್ಥನಂತೆ ವರ್ತಿಸಿರುವ ಖಾಸೀಂ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಮೂರು ಮಕ್ಕಳ ಗುಪ್ತಾಂಗಗಳಿಗೆ ಕಬ್ಬಿಣದ ರಾಡ್ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಆರೋಪಿ ಖಾಸೀಂನನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಮೃತ ಮಕ್ಕಳ ತಂದೆ ಚಾಂದ್ ಪಾಷ 5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.