ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ನಗರದ ಹೆಣ್ಣೂರು ಬಳಿ ಇರುವ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ ಹೊರಮಾವು ಉಪವಿಭಾಗದ ಎಇಇ ಕೆ.ವಿನಯ್ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ.
ಕಟ್ಟಡ ತೆರವಿಗೆ ಸ್ಥಿರೀಕರಣ ಆದೇಶ ಹೊರಡಿಸಿದ್ದರೂ ಎಇಇ ಕೆ.ವಿನಯ್ ನಿಗದಿತ ಅವಧಿಯೊಳಗೆ ಕ್ರಮಕೈಗೊಂಡಿಲ್ಲ. ಮೇಲ್ನೋಟಕ್ಕೆ 8 ಕಾರ್ಮಿಕರ ಸಾವಿಗೆ ಕಾರಣಕರ್ತರಾಗಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.