ಹೊಸ ದಿಗಂತ ವರದಿ, ಮಡಿಕೇರಿ:
ಬ್ರೇಕ್ ವಿಫಲಗೊಂಡು ಹಿಮ್ಮುಖವಾಗಿ ಚಲಿಸಿದ ಜೆಸಿಬಿಯಡಿ ಸಿಲುಕಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿ ಸಮೀಪದ ಕೂಟುಹೊಳೆ ಬಳಿ ನಡೆದಿದೆ.
ಮೃತರನ್ನು ಹಾಸನ ಮೂಲದ ಕಾರ್ಮಿಕ ಸಂತೋಷ್(22) ಎಂದು ಗುರುತಿಸಲಾಗಿದೆ.
ಜೆಸಿಬಿಯ ಬ್ರೇಕ್ ವಿಫಲಗೊಂಡು ಇಳಿಜಾರಿನಲ್ಲಿ ಹಿಮ್ಮುಖವಾಗಿ ಚಲಿಸಿದೆ. ಈ ಸಂದರ್ಭ ಕಾರ್ಮಿಕ ಸಂತೋಷ್ ಜೆಸಿಬಿಯಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಅವರ ಒಂದು ಕಾಲು ದೇಹದಿಂದ ಬೇರ್ಪಟ್ಟಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.