ಹೊಸದಿಗಂತ ವರದಿ ಬೆಳಗಾವಿ :
ಸೂಕ್ತ ದಾಖಲೆಗಳಿಲ್ಲದೇ ಮುಂಬೈನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.
ಮುಂಬೈಯಿಂದ ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್(KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿರುತ್ತದೆ.
ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.