ಮಲೆನಾಡಲ್ಲಿ ನಿಲ್ಲದ ಕಾಡಾನೆ-ಮಾನವನ ಸಂಘರ್ಷ : ಮತ್ತೋರ್ವ ಕಾಡಾನೆ ದಾಳಿಗೆ ಬಲಿ

ಹೊಸದಿಗಂತ ವರದಿ ಹಾಸನ :

ಹಾಸನ ಜಿಲ್ಲೆಯಲ್ಲಿ ನಿಲ್ಲದ ಕಾಡಾನೆ-ಮಾನವನ ನಡುವಿನ ಸಂಘರ್ಷದಿಂದ ಮತ್ತೋರ್ವ ವ್ಯಕ್ತಿ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಬೈಕೆರೆ ಗ್ರಾಮದಲ್ಲಿ ನಡೆದಿದೆ.

ಷಣ್ಮುಖ (36) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿ. ಹನ್ನೆರಡು ಎಕರೆ ಕಾಫಿ ತೋಟ ಹೊಂದಿದ್ದ ಷಣ್ಮುಖ ಇಂದು ಬೆಳಿಗ್ಗೆ ಕಾಫಿ ತೋಟಕ್ಕೆ ಎಂದಿನಂತೆ ತೆರಳಿದ್ದಾರೆ. ಮಧ್ಯಾಹ್ನವಾದರೂ ಮನೆಗೆ ಬಂದಿಲ್ಲ ಕಾರಣ ಕುಟುಂಬಸ್ಥರು ಷಣ್ಮುಖ ಅವರನ್ನುಹುಡುಕಿಕೊಂಡು ಕಾಫಿ ತೋಟಕ್ಕೆ ತೆರಳಿದ್ದ ವೇಳೆ ಕಾಫಿ ತೋಟದಲ್ಲಿ ಷಣ್ಮುಖ ಶವ ಪತ್ತೆಯಾಗಿದೆ.

ಷಣ್ಮುಖ ರನ್ನು ಕಾಡಾನೆ ಭೀಕರವಾಗಿ ತುಳಿದು ಸಾಯಿಸಿದೆ. ಕಳೆದ ಮೂರು ದಿನಗಳ ಹಿಂದೆ ಹೆಬ್ಬನಹಳ್ಳಿ ಗ್ರಾಮದಲ್ಲಿ ರಘು ಎಂಬುವವರ ಮೇಲೆ ದಾಳಿ ಮಾಡಿದ್ದ ಕಾಡಾನೆ ಇಂದು ಷಣ್ಮುಖನನ್ನು ಬರ್ಬರವಾಗಿ ಸಾಯಿಸಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ.. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!