ಹೊಸದಿಗಂತ ವರದಿ ಮಡಿಕೇರಿ:
ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸಾವಿಗೀಡಾದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೃತರನ್ನು ಪೊನ್ನಂಪೇಟೆ ಬಾಳೆಲೆ ರಸ್ತೆಯ ನಿವಾಸಿ, ನಿವೃತ್ತ ತಹಶೀಲ್ದಾರ್ ಚಾಮು ಅವರ ಪುತ್ರ ಮನು (30) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ 7.15ರ ಸುಮಾರಿಗೆ ಜೋಡುಬೀಟಿ ಸಮೀಪ ಮನು ಚಲಿಸುತ್ತಿದ್ದ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿರುವುದಾಗಿ ಹೇಳಲಾಗಿದೆ.