ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯಸಭೆಯಲ್ಲಿ ಇಂದು ಏಕರೂಪ ನಾಗರಿಕ ಸಂಹಿತೆಯನ್ನ ಸಿದ್ಧಪಡಿಸಲು ಸಮಿತಿಗೆ ಅವಕಾಶ ನೀಡುವ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲಾಯಿತು.
ವಿರೋಧ ಪಕ್ಷಗಳ ವಿರೋಧದ ನಡುವೆಯೇ ಮೇಲ್ಮನೆಯಲ್ಲಿ ‘ಏಕರೂಪ ನಾಗರಿಕ ಸಂಹಿತೆ ಮಸೂದೆ 2020’ ಅನ್ನು ಮಂಡಿಸಲಾಯಿತು.
ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರು ಏಕರೂಪ ನಾಗರಿಕ ಸಂಹಿತೆಯನ್ನ ಸಿದ್ಧಪಡಿಸಲು ಮತ್ತು ಭಾರತದಾದ್ಯಂತ ಅದರ ಅನುಷ್ಠಾನಕ್ಕಾಗಿ ರಾಷ್ಟ್ರೀಯ ತಪಾಸಣೆ ಮತ್ತು ತನಿಖಾ ಸಮಿತಿಯನ್ನ ರಚಿಸಲು ಮತ್ತು ಖಾಸಗಿ ಸದಸ್ಯರ ವ್ಯವಹಾರದ ಸಮಯದಲ್ಲಿ ಅದಕ್ಕೆ ಸಂಬಂಧಿಸಿದ ವಿಷಯಗಳಿಗೆ ಅವಕಾಶ ಕಲ್ಪಿಸಲು ಮಸೂದೆಯನ್ನು ಮಂಡಿಸಲು ಅನುಮತಿ ಕೋರಿದರು.
ಕಾಂಗ್ರೆಸ್, ಸಿಪಿಐ, ಸಿಪಿಐ (ಎಂ), ತೃಣಮೂಲ ಕಾಂಗ್ರೆಸ್ನ ವಿರೋಧ ಪಕ್ಷದ ಸದಸ್ಯರು ಮಸೂದೆಯನ್ನು ಮಂಡಿಸುವುದರ ವಿರುದ್ಧ ಪ್ರತಿಭಟಿಸಿದರು.
ವಿರೋಧ ಪಕ್ಷದ ಸದಸ್ಯರು ಮಸೂದೆಯನ್ನ ಹಿಂತೆಗೆದುಕೊಳ್ಳಲು ಒತ್ತಾಯಿಸಿದ್ದರಿಂದ, ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧಂಖರ್ ಅವರು ವಿಭಜನೆಗೆ ಕರೆ ನೀಡಿದರು . ಈ ವೇಳೆ ಮಸೂದೆಯ ಪರವಾಗಿ 63 ಮತಗಳು ಮತ್ತು ಅದರ ವಿರುದ್ಧ 23 ಮತಗಳೊಂದಿಗೆ ಮಸೂದೆಯನ್ನ ಮಂಡಿಸುವ ಪ್ರಸ್ತಾಪವನ್ನ ಅಂಗೀಕರಿಸಲಾಯಿತು.