ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಬಜೆಟ್ 2025 ಅನ್ನು ‘ಗುಂಡು ಗಾಯಗಳಿಗೆ ಬ್ಯಾಂಡ್-ಏಡ್’ ಎಂದು ಕರೆದಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ಬಜೆಟ್ ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ‘ಜಾಗತಿಕ ಅನಿಶ್ಚಿತತೆಯ ಮಧ್ಯೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಆಲೋಚನೆಗಳಿಂದ ದಿವಾಳಿಯಾಗಿದೆ’ ಎಂದು ಹೇಳಿದರು.
ಇಂದಿನ ಕೇಂದ್ರ ಬಜೆಟ್ ಗುಂಡು ಗಾಯಗಳಿಗೆ ಬ್ಯಾಂಡ್-ಏಡ್, ಜಾಗತಿಕ ಅನಿಶ್ಚಿತತೆಯ ಮಧ್ಯೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಆಲೋಚನೆಗಳಿಂದ ದಿವಾಳಿಯಾಗಿದೆ ಎಂಬುದಾಗಿ ಹೇಳಿದ್ದಾರೆ.