ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್ (Union Budget) ನವ ಭಾರತದ ದೃಷ್ಟಿಕೋನವನ್ನು ಹೊಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅಭಿಪ್ರಾಯಪಟ್ಟಿದ್ದಾರೆ.
ಬಜೆಟ್ನಲ್ಲಿ ನವ ಭಾರತ, ಹಾಗೂ ದೇಶದ ಸಮೃದ್ಧಿಯ ದೃಷ್ಟಿಕೋನ ಹಾಗೂ 130 ಕೋಟಿ ಭಾರತೀಯರಿಗೆ ಸೇವೆ ಸಲ್ಲಿಸುವ ಗುರಿಯನ್ನು ಹೊಂದಿದೆ. ಬಜೆಟ್ ಬಡವರು, ರೈತರು, ಯುವಕರು ಹಾಗೂ ಮಹಿಳೆಯರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ನಿರೀಕ್ಷೆಗಳು ಹಾಗೂ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ತಿಳಿಸಿದರು. ಈ ಬಜೆಟ್ ದೇಶದ ಆರ್ಥಿಕತೆಯನ್ನು ಸೂಪರ್ ಪವರ್ ಮಾಡುವಲ್ಲಿ ಒಂದು ಮೈಲುಗಲ್ಲು ಎಂದು ಸಾಬೀತು ಮಾಡುತ್ತದೆ ಎಂದು ತಿಳಿಸಿದರು.