ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅತ್ಯಂತ ಮಹತ್ವದ ನಿರ್ಧಾರ ಮಾಡಲಾಗಿದೆ.
ಸಭೆಯ ನಂತರ ಮಾತನಾಡಿದ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್, ಕೇಂದ್ರ ಸರ್ಕಾರ ಜಾತಿ ಜನಗಣತಿ ನಡೆಸಲು ನಿರ್ಧರಿಸಿದೆ ಎಂದು ಹೇಳಿದರು.
ಜಾತಿ ಗಣತಿಯಂತಹ ಸಮೀಕ್ಷೆಗಳು ಸಮಾಜದಲ್ಲಿ ಅನುಮಾನಗಳನ್ನು ಸೃಷ್ಟಿಸಿವೆ. ನಮ್ಮ ಸಾಮಾಜಿಕ ರಚನೆಯು ರಾಜಕೀಯದಿಂದ ತೊಂದರೆಗೊಳಗಾಗದಂತೆ ನೋಡಿಕೊಳ್ಳಲು ಸಮೀಕ್ಷೆಗಳ ಬದಲಿಗೆ ಜಾತಿ ಎಣಿಕೆಯನ್ನು ಜನಗಣತಿಯಲ್ಲಿ ಸೇರಿಸಲಾಗುವುದು ಎಂದು ಅವರು ಹೇಳಿದ್ದಾರೆ.
1947 ರಿಂದ ದೇಶದಲ್ಲಿ ಜಾತಿ ಜನಗಣತಿ ನಡೆದಿಲ್ಲ . ಮನಮೋಹನ್ ಸಿಂಗ್ ಜಾತಿ ಜನಗಣತಿಯ ಬಗ್ಗೆ ಮಾತನಾಡಿದ್ದರು. ಕಾಂಗ್ರೆಸ್ ಜಾತಿ ಜನಗಣತಿಯ ಮಾತನ್ನು ತನ್ನ ಸ್ವಂತ ಲಾಭಕ್ಕಾಗಿ ಮಾತ್ರ ಬಳಸಿಕೊಂಡಿದೆ. ಜಾತಿ ಜನಗಣತಿ ಕೇಂದ್ರಕ್ಕೆ ಮಾತ್ರ ಸಂಬಂಧಿಸಿದ ವಿಷಯ ಎಂದು ತಿಳಿಸಿದ್ದಾರೆ.
ಕೆಲವು ರಾಜ್ಯಗಳು ಈ ಕೆಲಸವನ್ನು ಸರಾಗವಾಗಿ ಮಾಡಿವೆ. ನಮ್ಮ ಸಾಮಾಜಿಕ ರಚನೆಯ ಮೇಲೆ ಪರಿಣಾಮ ಬೀರದಂತೆ ನಾವು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಮೋದಿ ಸರ್ಕಾರವು ಜಾತಿ ಜನಗಣತಿಯನ್ನು ಮೂಲ ಜನಗಣತಿಯ ಜೊತೆಯಲ್ಲಿ ಮಾಡಲಿದೆ ಎಂದು ತಿಳಿಸಿದ್ದಾರೆ.
ಮೇಘಾಲಯ-ಅಸ್ಸಾಂ ಹೈಸ್ಪೀಡ್ ಕಾರಿಡಾರ್
ಇದರೊಂದಿಗೆ, ಶಿಲ್ಲಾಂಗ್ ನಿಂದ ಸಿಲ್ಚಾರ್ (ಮೇಘಾಲಯ-ಅಸ್ಸಾಂ) ವರೆಗೆ ಹೈಸ್ಪೀಡ್ ಕಾರಿಡಾರ್ ನಿರ್ಮಿಸಲು ಮೋದಿ ಸಂಪುಟ ನಿರ್ಧರಿಸಿದೆ. ಇದು 166 ಕಿ.ಮೀ ಉದ್ದ ಮತ್ತು 6 ಪಥಗಳ ಉದ್ದವಿರುತ್ತದೆ. ಈ ಕಾರಿಡಾರ್ ಈಶಾನ್ಯಕ್ಕೆ ಮುಖ್ಯವಾಗಲಿದೆ. ಇದಕ್ಕೆ 22,864 ಕೋಟಿ ರೂ. ವೆಚ್ಚವಾಗಲಿದೆ.