ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಶ್ರೀಕೃಷ್ಣಮಠಕ್ಕೆಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಭೇಟಿ ನೀಡಿ, ದೇವರ ದರುಶನ ಪಡೆದರು.
ಈ ಸಂದರ್ಭ ಪರ್ಯಾಯ ಪೀಠಾಧಿಪತಿ ಶ್ರೀವಿದ್ಯಾಸಾಗರತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್,ಉಡುಪಿ ತಹಶೀಲ್ಧಾರ್ ಅರ್ಚನಾ ಭಟ್,ಪರ್ಯಾಯ ಮಠದ ದಿವಾನ ವರದರಾಜ ಭಟ್,ಪೇಜಾವರ ಮಠದ ದಿವಾನ ರಘುರಾಮ ಆಚಾರ್, ವಾಸುದೇವ ಪೆರಂಪಳ್ಳಿ ಉಪಸ್ಥಿತರಿದ್ದರು.