ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಪಿಎಂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (PM-RKVY) ಮತ್ತು ಸ್ವಾವಲಂಬನೆಗಾಗಿ ಆಹಾರ ಭದ್ರತೆಯನ್ನ ಸಾಧಿಸಲು ಕೃಷಿಭೂಮಿ ಯೋಜನೆ (KY) ಗೆ ಕೇಂದ್ರ ಸರ್ಕಾರ ಗುರುವಾರ ಅನುಮೋದನೆ ನೀಡಿದೆ.
ಒಟ್ಟು 1 ಲಕ್ಷ ಕೋಟಿ ರೂ.ಗಳ ಪ್ರಸ್ತಾವಿತ ವೆಚ್ಚದೊಂದಿಗೆ ಸ್ವಾವಲಂಬನೆಗಾಗಿ ಆಹಾರ ಭದ್ರತೆಯನ್ನ ಸಾಧಿಸುವ ಗುರಿ ಹೊಂದಿದೆ.ಈ ಯೋಜನೆಗಳು ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಖಾತ್ರಿಪಡಿಸುವತ್ತ ಗಮನ ಹರಿಸಿವೆ. ಒಟ್ಟು 1,01,321.61 ಕೋಟಿ ರೂ.ಗಳ ಪ್ರಸ್ತಾವಿತ ವೆಚ್ಚದೊಂದಿಗೆ ಈ ಯೋಜನೆಗಳನ್ನು ಜಾರಿಗೆ ತರಲಾಗುವುದು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು (CSS) ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ-ಆರ್ಕೆವಿವೈ), ಕೆಫೆಟೇರಿಯಾ ಯೋಜನೆ ಮತ್ತು ಕೃಷ್ಣೋನ್ನತಿ ಯೋಜನೆ (ಕೆವೈ) ಎಂಬ ಎರಡು ತ್ರಿಸದಸ್ಯ ಯೋಜನೆಗಳಾಗಿ ತರ್ಕಬದ್ಧಗೊಳಿಸುವ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ (DA&FW) ಪ್ರಸ್ತಾಪಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಖಾದ್ಯ ತೈಲಗಳ ರಾಷ್ಟ್ರೀಯ ಮಿಷನ್
ಜೊತೆಗೆ ಮುಂದಿನ ಏಳು ವರ್ಷಗಳಲ್ಲಿ ಭಾರತವನ್ನು ಎಣ್ಣೆಕಾಳು ಉತ್ಪಾದನೆಯಲ್ಲಿ ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶದಿಂದ, 2024-25 ರಿಂದ 2030-31 ರವರೆಗೆ 10,103 ಕೋಟಿ ರೂ.ಗಳ ವೆಚ್ಚದಲ್ಲಿ ಖಾದ್ಯ ತೈಲಗಳು – ಎಣ್ಣೆಕಾಳುಗಳ ರಾಷ್ಟ್ರೀಯ ಮಿಷನ್ (NMEO-Oilseeds) ಗೆ ಸಂಪುಟ ಅನುಮೋದನೆ ನೀಡಿದೆ.
2031ರ ವೇಳೆಗೆ ಖಾದ್ಯ ತೈಲ ಉತ್ಪಾದನೆಯನ್ನು 12.7 ಮಿಲಿಯನ್ ಟನ್’ಗಳಿಂದ 20.2 ಮಿಲಿಯನ್ ಟನ್ ಗಳಿಗೆ ಹೆಚ್ಚಿಸುವುದು ಖಾದ್ಯ ತೈಲಗಳ ರಾಷ್ಟ್ರೀಯ ಮಿಷನ್’ನ ಗುರಿಯಾಗಿದೆ.