ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು (ಮಾರ್ಚ್ 23) ರಾತ್ರಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಗಮಿಸಲಿದ್ದು, ಶುಕ್ರವಾರ ಚುನಾವಣಾ ಪ್ರಚಾರವೂ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಹೀಗಾಗಿ ಸಿಲಿಕಾನ್ ಸಿಟಿಯ ಕೆಲವು ಮಾರ್ಗಗಳಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಬಗ್ಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಗಮನ ಹರಿಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bengaluru Traffic Police) ಪ್ರಕಟಣೆ ಹೊರಡಿಸಿದ್ದಾರೆ.
ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಈ ಕೆಳಗೆ ಉಲ್ಲೇಖಿಸಿರುವ ಮಾರ್ಗಗಳಲ್ಲಿ ಸಂಚರಿಸದಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ಹಳೆ ವಿಮಾನ ನಿಲ್ದಾಣ ರಸ್ತೆ, ಮೈಸೂರು ರಸ್ತೆ, ಎನ್ಆರ್ ರಸ್ತೆ, ನೃಪತುಂಗ ರಸ್ತೆ, ಅರಮನೆ ರಸ್ತೆ, ಶೇಷಾದ್ರಿ ರಸ್ತೆ, ಕೆಂಗೇರಿಯಿಂದ ಕೊಮ್ಮಘಟ್ಟ ರಸ್ತೆ, ರೇಸ್ಕೋರ್ಸ್ ರಸ್ತೆ ಗಳಲ್ಲಿ ನಿರ್ಬಂಧ ಹೇರಲಾಗಿದೆ.
ಇನ್ನು ಕೆಲವು ರಸ್ತೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 4ರ ವರೆಗೆ ಲಘು, ಮಧ್ಯಮ ಹಾಗೂ ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ರಸ್ತೆಗಳ ವಿವರ ಹೀಗಿದೆ;
ಟೌನ್ಹಾಲ್ನಿಂದ ಎನ್ಆರ್ ರಸ್ತೆ, ಮೈಸೂರು ರಸ್ತೆ ಕಡೆಗೆ
ನಾಯಂಡಹಳ್ಳಿಯಿಂದ ನಗರದ ಕಡೆಗೆ ಮತ್ತು ಕೆಂಗೇರಿ ಕಡೆಗೆ
ಕುಂಬಳಗೋಡಿನಿಂದ ಕೆಂಗೇರಿ (ನಗರದ ಕಡೆಗೆ)
ಅದೇ ರೀತಿ ಪರ್ಯಾಯ ಮಾರ್ಗಗಲಾಲ್ಜಿ ಇವುಗಳನ್ನು ಬಳಸಲು ಸೂಚಿಸಲಾಗಿದೆ. ಮೈಸೂರು ರಸ್ತೆ ಕಡೆಗೆ ತೆರಳಲು ಸರಕು ಸಾಗಣೆ ವಾಹನಗಳು ಎನ್ಆರ್ ರಸ್ತೆ ಬದಲಾಗಿ ಲಾಲ್ಬಾಗ್ ರಸ್ತೆ ಮೂಲಕ ಹೊಸೂರು ರಸ್ತೆ ನೈಸ್ ರಸ್ತೆ ಮೂಲಕ ಸಂಚರಿಸಲು ಸೂಚಿಸಲಾಗಿದೆ.
ನಾಯಂಡಹಳ್ಳಿ ಜಂಕ್ಷನ್ನಿಂದ ನಗರದತ್ತ ತೆರಳುವ ಸರಕು ಸಾಗಣೆ ವಾಹನಗಳು ನಾಗರಭಾವಿ ಹಾಗೂ ಸುಮನಹಳ್ಳಿ ರಸ್ತೆ ಮೂಲಕ ಸಾಗುವಂತೆ ಸೂಚಿಸಲಾಗಿದೆ.
ನಗರದಿಂದ ಕುಂಬಳಗೋಡು ಮತ್ತು ಕೆಂಗೇರಿ ಕಡೆಗೆ ಸಾಗುವ ಸರಕು ಸಾಗಣೆ ವಾಹನಗಳು ನೈಸ್ ರಸ್ತೆ ಮೂಲಕ ಸಂಚರಿಸಬಹುದು ಎಂದು ಸಲಹೆ ನೀಡಲಾಗಿದೆ.