ಸಿಎಂ ನಿವಾಸಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ: ಡ್ಯಾಶ್​ ಬೋರ್ಡ್ ಕುರಿತು ಚರ್ಚೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯಕ್ಕೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಭೇಟಿ ನೀಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ರೇಸ್ ವ್ಯೂ ಕಾಟೇಜ್ ಸರ್ಕಾರಿ ನಿವಾಸಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಗಮಿಸಿದರು. ಅವರನ್ನು ಮುಖ್ಯಮಂತ್ರಿಯವರ ಪತ್ನಿ ಚೆನ್ನಮ್ಮ ಸ್ಥಳೀಯ ಸಂಪ್ರದಾಯದಂತೆ ಅರಿಶಿನ ಕುಂಕುಮ ಹಾಗೂ ಉಡುಗೊರೆ ನೀಡಿ ಸತ್ಕರಿಸಿದರು.
ಈ ವೇಳೆ ಸಿಎಂ ಭೇಟಿಯಾದ ಸ್ಕೃತಿ ಇರಾ‌ನಿ ಅಂಗನವಾಡಿ ಡ್ಯಾಶ್ ಬೋರ್ಡ್ ಕುರಿತು ಸಮಾಲೋಚನೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜನೆಗಳ ಕುರಿತು ಮಾತುಕತೆ ನಡೆಸಿದರು.
ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ತಾಲೂಕಿನ ಮಟ್ಟದಲ್ಲಿ ಸಭೆಯನ್ನು ನಡೆಸಿ, ನಂತರ ಮಾಹಿತಿಯನ್ನು ಡ್ಯಾಶ್ ಬೋರ್ಡ್ ದಾಖಲಾತಿಯಲ್ಲಿ ಫೋಟೋ ಸಹಿತ ಹಾಕಲಾಗುವುದು. ಮಕ್ಕಳನ್ನು ಯಾವ ಅಂಗನವಾಡಿಯ ಟೀಚರ್, ಸಿಡಿಪಿಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೋ, ಅಂತವರನ್ನು ಗುರುತಿಸಿ ಪ್ರಶಸ್ತಿಗೆ ಶಿಫಾರಸು ಮಾಡುವ ಮೂಲಕ ಸನ್ಮಾನಿಸಲಾಗುವುದು ಎನ್ನುವ ಮಾಹಿತಿಯನ್ನು ಸ್ಮೃತಿ ಇರಾನಿ ಅವರಿಗೆ ಸಿಎಂ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!