ಪಾಕ್ ಕ್ರಿಕೆಟ್ ಮುಖ್ಯಸ್ಥ ರಮೀಜ್‌ ರಾಜಾ ಹೇಳಿಕೆಗೆ ಖಡಕ್‌ ಉತ್ತರ ನೀಡಿದ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತ ತಂಡ ಪಾಕಿಸ್ತಾನಕ್ಕೆ ಕ್ರಿಕೆಟ್‌ ಅಡಲು ಬರದೇ ಹೋದರೆ ನಾವು ನಮ್ಮ ತಂಡವನ್ನು ಏಕ ದಿನ ವಿಶ್ವ ಕಪ್‌ಗಾಗಿ ಭಾರತಕ್ಕೆ ಕಳುಹಿಸುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಮುಖ್ಯಸ್ಥರಾದ ರಮೀಜ್‌ ರಾಜಾ ಹೇಳಿಕೆ ನೀಡಿದ ಬೆನ್ನಲ್ಲೇ ಕೇಂದ್ರ ಕ್ರೀಡಾ ಸಚಿವರಾದ ಅನುರಾಗ್‌ ಠಾಕೂರ್‌ ಅವರು ಖಡಕ್‌ ಉತ್ತರ ನೀಡಿದ್ದಾರೆ.

ಸೂಕ್ತ ಕಾಲಕ್ಕೆ ಕಾಯಿರಿ. ಇನ್ನೇನು ಕೆಲವೇ ದಿನಗಳಲ್ಲಿ ಭಾರತ ಜಾಗತಿಕ ಕ್ರೀಡಾ ಕ್ಷೇತ್ರದ ಸೂಪರ್‌ ಪವರ್‌ ಎನಿಸಿಕೊಳ್ಳಲಿದೆ. ಆಗ ಯಾರೂ ಭಾರತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂಬುದಾಗಿ ಹೇಳಿದ್ದಾರೆ.

ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುವ ಏಷ್ಯಾ ಕಪ್‌ನಲ್ಲಿ ಪಾಲ್ಗೊಳ್ಳಲು ಟೀಮ್‌ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂಬುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಕೆಲವು ದಿನಗಳ ಹಿಂದೆ ಹೇಳಿಕೆ ಕೊಟ್ಟಿದ್ದರು. ಅದನ್ನು ಸಹಿಸದ ಪಿಸಿಬಿ ಮುಖ್ಯಸ್ಥ ರಮೀಜ್‌ ಅವರು, ಹಾಗಾದರೆ ನಾವು ಭಾರತಕ್ಕೆ ನಮ್ಮ ತಂಡವನ್ನೂ ಕಳುಹಿಸುವುದಿಲ್ಲ ಎಂದು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!