ಬಿಹಾರ ರೈಲು ಅಪಘಾತ: ಪುನಶ್ಚೇತನ ಕಾಮಗಾರಿ ಪರಿಶೀಲಿಸಿದ ಸಚಿವ ಅಶ್ವಿನಿ ಚೌಬೆ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಹಾರದಲ್ಲಿ ಈಶಾನ್ಯ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದ ಸ್ಥಳಕ್ಕೆ ಕೇಂದ್ರ ಸಚಿವ ಅಶ್ವಿನಿ ಚೌಬೆ ಭೇಟಿ ನೀಡಿದ್ದು, ಮರುಸ್ಥಾಪನೆ ಕಾರ್ಯ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಇದೊಂದು ಭಯಾನಕ ದೃಶ್ಯವಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಬೆಂಬಲ ನೀಡಿದ ಸ್ಥಳೀಯರಿಗೆ ನಾನು ಧನ್ಯವಾದ ಹೇಳುತ್ತೇನೆ…ಸಾವಿರಾರು ಜನರು ತಮ್ಮ ಎಲ್ಲಾ ಕೆಲಸಗಳನ್ನು ಬಿಟ್ಟು ಇಲ್ಲಿಗೆ ಸಹಾಯ ಮಾಡಲು ಧಾವಿಸಿದ್ದರು ನಿಮ್ಮೆಲ್ಲರಿಗೂ ನಾನು ಋಣಿ” ಎಂದರು.

ಮರುಸ್ಥಾಪನೆ ಕಾರ್ಯ ನಡೆಯುತ್ತಿದ್ದು, ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದರು. ಈ ಕುರಿತು ರೈಲ್ವೆ ಸಚಿವಾಲಯದಿಂದ ಪ್ರಧಾನ ಮಂತ್ರಿ ಕಚೇರಿಯ ಎಲ್ಲಾ ಇಲಾಖೆಗಳಿಗೆ ಮಾಹಿತಿ ನೀಡಿದ್ದೇನೆ. ಯಾವುದೇ ಚಿಕಿತ್ಸೆಗಾದರೂ ಆಸ್ಪತ್ರೆಗಳು ಸನ್ನದ್ದವಾಗಿರುವಂತೆ ಸೂಚಿಸಿರುವುದಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!