ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ (Nisith Pramanik) ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬಂಗಾಳದ ಕೂಚ್ ಬೆಹಾರ್ನಲ್ಲಿ ನಡೆದಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರು ಕೂಚ್ ಬೆಹಾರ್ಗೆ ತೆರಳಿದಾಗ ಅವರ ಬೆಂಗಾವಲು ವಾಹನದ ಮೇಲೆ ಕಲ್ಲುಗಳ ತೂರಾಟ ನಡೆಸಿದ್ದಾರೆ. ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಈ ದಾಳಿಯನ್ನು ನಡೆಸಿದ್ದಾರೆ ಎಂದು ಪ್ರಮಾಣಿಕ್ ಆರೋಪಿಸಿದ್ದಾರೆ.
ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಹಾರಿಸಬೇಕಾಯಿತು. ಇಲ್ಲಿ ಸಚಿವರೊಬ್ಬರು ಸುರಕ್ಷಿತವಾಗಿಲ್ಲದಿದ್ದರೆ ಜನಸಾಮಾನ್ಯರ ಪಾಡು ಹೇಗೆ? ಈ ಘಟನೆಯು ಬಂಗಾಳದ ಪ್ರಜಾಪ್ರಭುತ್ವದ ಸ್ಥಿತಿಯನ್ನು ತೋರಿಸುತ್ತದೆ ಎಂದು ಹೇಳಿದರು.