ಹೊಸದಿಗಂತ ವರದಿ, ಹುಬ್ಬಳ್ಳಿ:
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ 60 ನೇ ಜನ್ಮದಿನದ ಅಂಗವಾಗಿ ಹು-ಧಾ ಮಹಾಮಗರ ಜಿಲ್ಲಾ ವತಿಯಿಂದ ವಿವಿಧ ಸಮಾಜ ಸೇವಾ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಮಾಡಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಮೋದಿಯವರ ಮಾರ್ಗದರ್ಶನದಂತೆ ನಾಯಕರ ದುಂದುವೆಚ್ಚ ಮಾಡದೆ ಆರೋಗ್ಯ ಹಾಗೂ ಸಮಾಜ ಸೇವೆ ಮಾಡಲಾಗುತ್ತಿದೆ ಎಂದರು.
ನ. 26 ರಂದು ನಗರದ ಚನ್ನಮ್ಮ ವೃತ್ತದಲ್ಲಿ ಅನ್ನ ಸಂತರ್ಪಣೆ, 27 ರಂದು ರಾಷ್ಟ್ರೋತ್ಥಾನ ರಕ್ತ ಕೇಂದ್ರದ ವತಿಯಿಂದ ಸ್ಟೇಶನ್ ರಸ್ತೆಯ ಈಶ್ವರ ದೇವಸ್ಥಾನದಿಂದ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.
ನ. 27 ರಂದು ಹು-ಧಾ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ವತಿಯಿಂದ ಆಯುಷ್ಮಾನ ಕಾಡ್೯ ವಿತರಿಸಲಾಗುತ್ತದೆ. ವಾಡ್೯ ನಂ. 80 ನೇ ಕಾರನಗರದಲ್ಲಿ ಪೌರ ಕಾರ್ಮಿಕ ಸನ್ಮಾನ, ಅಮರಗೋಳದ ಹಮಾಲ ಕೂಲಿ ಕಾರ್ಮಿಕರ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ, ಹು-ಧಾ ಮಹಾನಗರ ಒಟ್ಟು 60 ದೇವಸ್ಥಾನಗಳಲ್ಲಿ ಪ್ರಲ್ಹಾದ ಜೋಶಿ ಪರವಾಗಿ ಅಭಿಷೇಕ, ದುರ್ಗಗ ಬೈಲ್ ವೃತ್ತದಲ್ಲಿ ಸಂಜೆ ಸಾಂಸ್ಕೃತಿಕ ಸಮಾರಂಭ ಹಾಗೂ ಸೀರೆ ವಿತರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರಗಿ, ಚಂದ್ರಶೇಖರ ಗೋಕಾಕ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ರವಿ ನಾಯಕ ಇದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ