ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಪಶ್ಚಿಮ್ ಬರ್ದಮಾನ್ ಜಿಲ್ಲೆಯ ದುರ್ಗಾಪುರ್ ಸಬ್ ಡಿವಿಷನ್ ನಲ್ಲಿರುವ ಝಾಂಜ್ರಾ ಕಲ್ಲಿದ್ದಲು ಗಣಿಗೆ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಇದು ದೇಶದಲ್ಲೇ ಅತಿ ಹೆಚ್ಚು ಕಲ್ಲಿದ್ದಲು ಉತ್ಪಾದಿಸುವ, ಭೂ ಮೇಲ್ಮೈಯಿಂದ 225 ಮೀಟರ್ ಆಳದಲ್ಲಿರುವ ಕಲ್ಲಿದ್ದಲು ಗಣಿ.
ಈ ವೇಳೆ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿಯವರು, ಈಸ್ಟರ್ನ್ಕೋಲ್ನ ಝಂಜ್ರಾ ಭೂಗತ ಗಣಿಯೊಳಗೆ 225 ಮೀಟರ್ ಆಳಕ್ಕೆ ತೆರಳಿ ಅಂಡರ್ ಗ್ರೌಂಡ್ ನಲ್ಲಿ ಒಂದುವರೆ ಕಿ.ಮೀ ಪ್ರಯಾಣಿಸಿದ್ದು ಹೊಸ ಅನುಭವ ನೀಡಿದೆ ಎಂದರು. ವರ್ಷಕ್ಕೆ 3.5 ಮಿಲಿಯನ್ ಟನ್ ಸಾಮರ್ಥ್ಯ ಹೊಂದಿರುವ ಝಂಜ್ರಾ ಕಲ್ಲಿದ್ದಲು ಗಣಿ, ಭಾರತದ ಅತಿ ಹೆಚ್ಚು ಕಲ್ಲಿದ್ದಲು ಉತ್ಪಾದಿಸುವ ಯಾಂತ್ರಿಕೃತ ಭೂಗತ ಗಣಿಯಾಗಿದೆ.
ಇಷ್ಟೊಂದು ಆಳಕ್ಕೆ ಹೋಗಿ ಪ್ರತಿ ನಿತ್ಯ ಕಷ್ಟಕರ ಪರಿಸ್ಥಿತಿಗಳನ್ನ ಎದುರಿಸಿ ಕಲ್ಲಿದ್ದಲು ಉತ್ಪಾದನೆಗೆ ಶ್ರಮಿಸುತ್ತಿರುವ ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಿದರು. ಇಲ್ಲಿನ ಕಾರ್ಮಿಕರು ಯೋಧರ ರೀತಿಯಲ್ಲಿ ಕೆಲಸ ಮಾಡ್ತಿದ್ದಾರೆ ಶ್ಲಾಘನೆ ವ್ಯಕ್ತಪಡಿಸಿದರು.