ಇರುಮುಡಿ ಹೊತ್ತು ಅಯ್ಯಪ್ಪನ ದರುಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಕರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಬರಿಮಲೆ ಅಯ್ಯಪ್ಪನ ಸನ್ನಿಧಾನ ಭಕ್ತರ ದರುಶನಕ್ಕೆ ತೆರೆದುಕೊಂಡಿದ್ದು, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಪಾದಯಾತ್ರೆ ಮೂಲಕ ಶಬರಿಮಲೆ ಅಯ್ಯಪ್ಪನ ದರುಶನ ಪಡೆದಿದ್ದಾರೆ.

ಬೆಂಗಳೂರಿನ ಅಯ್ಯಪ್ಪ ದೇವಸ್ಥಾನದಿಂದ ಇರುಮುಡಿಕಟ್ಟು ತುಂಬಿಕೊಂಡು ಕೇರಳದ ಪಟ್ಟಣಂತಿಟ್ಟಗೆ ತೆರಳಿದ ಸಚಿವರು, ಯಾತ್ರಾರ್ಥಿಗಳೊಂದಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ಇಂದು ಬೆಳಗ್ಗೆ ಪಂಬಾದಿಂದ ಇರುಮುಡಿ ಹೊತ್ತುಕೊಂಡು ಪಾದಯಾತ್ರೆ ಆರಂಭಿಸಿದ ರಾಜೀವ್ ಚಂದ್ರಶೇಖರ್ ಅಯ್ಯಪ್ಪನ ಸನ್ನಿಧಾನ ತಲುಪಿದ್ದಾರೆ. ಅಯ್ಯಪ್ಪನ ದರುಶನ ಪಡೆದ ಬಳಿಕ ಪೂಜೆ ಸಲ್ಲಿಸಿದ್ದಾರೆ.

 

ಅಯ್ಯಪ್ಪನ ದರುಶನ ಕುರಿತು ರಾಜೀವ್ ಚಂದ್ರಶೇಕರ್ ಟ್ವಿಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
2016ರಿಂದ 2022ರ ವರೆಗಿನ ನಾಲ್ಕು ಬಾರಿ ಅಯ್ಯಪ್ಪನ ಸನ್ನಿಧಾನವನ್ನು ಪಾದಯಾತ್ರೆ ಮೂಲಕ ದರ್ಶಿಸಿದ್ದಾರೆ. ಈ ಬಾರಿ ಸೇರಿದಂತೆ ಕಳೆದ 4 ಬಾರಿ ಪಾದಯಾತ್ರೆ ಮೂಲಕ ಅಯ್ಯಪ್ಪ ಸನ್ನಿಧಾನ ತಲುಪಲು ತೆಗೆದುಕೊಂಡ ಸಮಯವನ್ನು ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!