ಕೇಂದ್ರದ ಮಂತ್ರಿಗಳು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ವರದಿ, ಮಂಡ್ಯ :

ಮೇಕೆದಾಟುಗೆ ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. ಸಚಿವ ಎಚ್.ಡಿ.ಕುಮಾರಸ್ವಾಮಿ ಕೇಂದ್ರದಿಂದ ಅನುಮತಿ ಕೊಡಿಸಲಿ. ಆ ಯೋಜನೆಯನ್ನೂ ನಾವು ಮಾಡುತ್ತೇವೆ. ಮೇಕೆದಾಟು ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರೊಂದಿಗೆ ಬೆಂಗಳೂರು 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾವೇರಿ 5ನೇ ಹಂತದ ಯೋಜನೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಮೇಕೆದಾಟು ವಿಚಾರವಾಗಿ ತಮಿಳುನಾಡು ಸರ್ಕಾರ ರಾಜಕೀಯವಾಗಿ ಕ್ಯಾತೆ ತೆರೆಯುತ್ತಿದೆ. ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ ಈ ಯೋಜನೆ ಸಾಧ್ಯ. ಕೇಂದ್ರದ ಮಂತ್ರಿಗಳು ಕೂಡಲೇ ಮೇಕೆದಾಟುಗೆ ಅನುಮತಿ ಕೊಡಿಸುವ ಕೆಲಸ ಮಾಡಲಿ ಎಂದು ಸಲಹೆ ನೀಡಿದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!