ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಕೇಂದ್ರ ಪ್ರವಾಸೋದ್ಯಮ ಸಂಸ್ಕೃತಿ ಸಚಿವ ಜಿ.ಕಿಶನ್‍ ರೆಡ್ಡಿ ಚಾಲನೆ

ದಿಗಂತ ವರದಿ ವಿಜಯನಗರ(ಹಂಪಿ):

ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಸಚಿವ ಜಿ.ಕಿಶನ್‍ ರೆಡ್ಡಿ ಅವರು ಹಂಪಿಯಲ್ಲಿ ‌ನಡೆಯಲಿರುವ ಕಾರ್ಯಕ್ರಮಕ್ಕೆ ಭಾಗವಹಿಸುವ ಮುನ್ನ ತೋರಣಗಲ್ ವಿಮಾನ ನಿಲ್ದಾಣದಲ್ಲಿ ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹಾಗೂ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಶುಕ್ರವಾರ ಹೂ ಗುಚ್ಛ ನೀಡಿ ಸ್ವಾಗತಿಸಿದರು.

ನಂತರ ರಸ್ತೆ‌ ಮೂಲಕ ವಿಶ್ವ ಪ್ರಸಿದ್ಧ ಹಂಪಿಗೆ ತೆರಳಿ‌ ದೇವಯಾತನಂ-ಭಾರತೀಯ ದೇವಾಲಯ ವಾಸ್ತುಶಿಲ್ಪ ಅದ್ಭುತ ಮಹಾಕಾವ್ಯ’’ ಕುರಿತು ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಸಚಿವ ಜಿ.ಕಿಶನ್‍ ರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ‌ನಗರಾಭಿವೃದ್ಧ‌ ಪ್ರಾಧಿಕಾರದ ಅಧ್ಯಕ್ಷ ಕಾರ್ಕಲತೋಟ ಪಾಲನ್ನ, ಮಾಜಿ ಸಂಸದರಾದ ಸಣ್ಣ ಫಕೀರಪ್ಪ, ಜೆ.ಶಾಂತಾ, ಎಚ್.ಓಬಳೇಶ್, ವೀರಶೇಖರ್ ರೆಡ್ಡಿ, ತಿಮ್ಮಪ್ಪ, ಕೆ.ಎಸ್.ದಿವಾಕರ್, ಶ್ರೀನಿವಾಸ್ ‌ಮೋತ್ಕರ್, ಕೃಷ್ಣಾರೆಡ್ಡಿ, ಮಲ್ಲನಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!