ಹೊಸದಿಗಂತ ವರದಿ ವಿಜಯಪುರ:
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವಿಗೀಡಾದ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಬಳಿ ಶನಿವಾರ ರಾತ್ರಿ ನಡೆದಿದೆ. ಜಗ್ಗು ಲಕಡಿ (23), ಸಂತೋಷ ಬಿರಾದಾರ (23), ಈಶ್ವರ ಸಿಂಧೆ (24) ಮೃತ ದುರ್ದೈವಿಗಳು.
ಈ ಮೂವರು ಒಂದೇ ಬೈಕ್ನಲ್ಲಿ, ಡಾಬಾವೊಂದರಲ್ಲಿ ಊಟ ಮಾಡಿಕೊಂಡು ಊರಿಗೆ ಹೋಗುತ್ತಿದ್ದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ.ಬೈಕ್ ಗೆ ಡಿಕ್ಕಿ ಬಳಿಕ ಅಪರಿಚಿತ ವಾಹನ ಸವಾರ, ವಾಹನದ ಸಮೇತ ಪರಾರಿಯಾಗಿದ್ದಾನೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.