ರೈಲಿಗೆ ಸಿಕ್ಕಿ ಅಪರಿಚಿತ ಯುವಕ ಆತ್ಮಹತ್ಯೆ

ಹೊಸದಿಗಂತ ವರದಿ, ಮಂಡ್ಯ:

ಅಪರಿಚಿತ ಯುವಕನೋರ್ವ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಂಡ್ಯ-ಯಲಿಯೂರು ರೈಲು ನಿಲ್ದಾಣಗಳ ಮಧ್ಯೆ ನಡೆದಿದೆ.
ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದುಘಿ, ಈತನ ಶವವನ್ನು ಮಿಮ್ಸ್‌ನ ಶವಾಗಾರಕ್ಕೆ ಸಾಗಿಸಲಾಗಿದೆ.
ಕಪ್ಪು ಮೈಬಣ್ಣ, ದೃಢಕಾಯ ಶರೀರ, ದುಂಡು ಮುಖ, ತಲೆಯಲ್ಲಿ ಕಪ್ಪು ಕೂದಲು, ಕಪ್ಪು ಬಣ್ಣದ ಮೀಸೆ ದಾಡಿ ಇರುತ್ತದೆ. ಹರಿಶಿನ ಬಣ್ಣದ ಬಿಳಿ ಗೆರೆಗಳುಳ್ಳ ಅರ್ಧ ತೋಳಿನ ಅಂಗಿ, ಮಾಸಲು ಬಣ್ಣದ ಒಳ ಉಡುಪು, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದಾನೆ.
ಮೃತನ ವಾರಸುದಾರರು ಇದ್ದಲ್ಲಿ ರೈಲ್ವೆ ಪೊಲೀಸ್ ಠಾಣೆ ದೂ. 0821-2516579, 08232-222340 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!