ಮಹದೇಶ್ವರ ಬೆಟ್ಟದಲ್ಲಿ ನಾಲ್ಕು ಹುಲಿಗಳ ಅಸಹಜ ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್;

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿದ್ದು, ಈ ಕುರಿತು ಪಿಸಿಸಿಎಫ್ ನೇತೃತ್ವದ ತಂಡದ ತನಿಖೆ ನಡೆಸಬೇಕು ಎಂದು ಪರಿಸರ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!