ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು: ಐವರು ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಭಂದ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಹುಲಿಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ.

ಹುಲಿ ಸಾವು ಸಂಬಂಧ ಮೀಣ್ಯಂ ಅರಣ್ಯ ಪ್ರದೇಶ ಸಮೀಪದ ಗ್ರಾಮಸ್ಥರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಪೊಲೀಸರು ಗ್ರಾಮಸ್ಥರನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಮಾಹಿತಿ ಕಲೆಹಾಕುತ್ತಿದ್ದಾರೆ. ಹಸುವಿನ ಕಳೇಬರದ ಬಳಿ ಕರೆದುಕೊಂಡು ಹೋಗಿ ಯಾರು ಅದರ ಮಾಲೀಕರು ಎಂಬುದನ್ನೂ ವಿಚಾರಣೆ ಮಾಡಲಾಗುತ್ತಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!