ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಇಲ್ಲಸಲ್ಲದ ಸುದ್ದಿ: ಬಿಬಿಸಿಗೆ ಬಿಸಿ ಮುಟ್ಟಿಸಿದ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಹಲ್ಗಾಮ್ ಉಗ್ರರ ದಾಳಿ ಕುರಿತು ಕಪೋಲಕಲ್ಪಿತ ಸುದ್ದಿ ಪ್ರಕಟಿಸಿದ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ ವಿರುದ್ಧ ಕೇಂದ್ರ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಪಹಲ್ಗಾಮ್ ಉಗ್ರರ ದಾಳಿ ಘಟನೆ ಬಳಿಕ ಪಾಕಿಸ್ತಾನ ಭಾರತೀಯರಿಗೆ ವೀಸಾಗಳನನು ಸ್ಥಗಿತಗೊಳಿಸಿದೆ ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಕಟಿಸಿರುವ ಬಿಬಿಸಿ, ಉಗ್ರರ ದಾಳಿಯನ್ನು ಬಂಡುಕೋರರ ದಾಳಿ ಎಂದು ಉಲ್ಲೇಖಿಸಿದೆ. ಇದಕ್ಕೆ ಕೇಂದ್ರ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಬಿಸಿ ಭಾರತದ ಮುಖ್ಯಸ್ಥ ಜಾಕಿ ಮಾರ್ಟಿನ್ ಅವರಿಗೆ ಪತ್ರ ಬರೆದಿದೆ ಎಚ್ಚರಿಕೆ ನೀಡಿದೆ. ಅಲ್ಲದೆ, ಸ್ಪಷ್ಟನೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಬಿಬಿಸಿಗೆ ಬರೆದ ಔಪಚಾರಿಕ ಪತ್ರದಲ್ಲಿ, ವಿದೇಶಾಂಗ ಸಚಿವಾಲಯವು ಬಿಬಿಸಿಯ ವರದಿಯನ್ನು ಮೇಲ್ವಿಚಾರಣೆ ಮಾಡಲಿದೆ ಎಂದು ತಿಳಿಸಿದೆ ಎಂದು ವರದಿಗಳು ತಿಳಿಸಿವೆ. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿದಂತೆ 26 ಜನರು ಸಾವನ್ನಪ್ಪಿದ ವರದಿಯನ್ನು ಲಘುವಾಗಿ ಪರಿಗಣಿಸಿದ್ದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯನ್ನು ಅಮೆರಿಕಾ ಸರ್ಕಾರ ತರಾಟೆಗೆ ತೆಗೆದುಕೊಂಡಿತ್ತು.

ಪಹಲ್ಗಾಮ್ ಉಗ್ರರ ದಾಳಿ ಕುರಿತು ವರದಿ ಮಾಡಿದ್ದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ, ಭಯೋತ್ಪಾದಕರು ಎಂಬ ಪದದ ಬದಲು ಬಂದೂಕುಧಾರಿಗಳು ಎಂಬ ಪದಗಳನ್ನು ಬಳಸಿತ್ತು. ಈ ಮೂಲಕ ಘಟನೆಯ ಗಂಭೀರತೆಯನ್ನು ಕಡಿಮೆ ಮಾಡಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!