ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿರೋಷಿಮಾದಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಶಾಂತಿ ಮತ್ತು ಸಾಮರಸ್ಯದ ಗಾಂಧಿ ಆದರ್ಶಗಳು ಜಾಗತಿಕವಾಗಿ ಪ್ರತಿಧ್ವನಿಸುತ್ತವೆ ಮತ್ತು ಲಕ್ಷಾಂತರ ಜನರಿಗೆ ಶಕ್ತಿ ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಈ ಸಂದರ್ಭದಲ್ಲಿ ಹೇಳಿದರು.

ಜಿ-7 ಶೃಂಗಸಭೆಗೆ ಪ್ರಧಾನ ಮಂತ್ರಿ ಭೇಟಿ ನೀಡುವ ಸಂದರ್ಭದಲ್ಲಿ ಭಾರತ ಮತ್ತು ಜಪಾನ್ ನಡುವಿನ ಸ್ನೇಹ ಮತ್ತು ಸೌಹಾರ್ದತೆಯ ಸಂಕೇತವಾಗಿ ಭಾರತ ಸರ್ಕಾರವು ಹಿರೋಷಿಮಾ ನಗರಕ್ಕೆ ಮಹಾತ್ಮ ಗಾಂಧಿ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದೆ.

42 ಇಂಚು ಎತ್ತರದ ಕಂಚಿನ ಪ್ರತಿಮೆಯನ್ನು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಶ್ರೀ ರಾಮ್ ವಾಂಜಿ ಸುತಾರ್ ಅವರು ಕೆತ್ತಿದ್ದಾರೆ. ಮೊಟೊಯಾಸು ನದಿಯ ಪಕ್ಕದಲ್ಲಿರುವ ಐಕಾನಿಕ್ ಎ-ಬಾಂಬ್ ಡೋಮ್‌ಗೆ ಸಮೀಪದಲ್ಲಿದೆ. ಈ ಸ್ಥಳಕ್ಕೆ ಪ್ರತಿದಿನ ಸಾವಿರಾರು ಸ್ಥಳೀಯರು ಮತ್ತು ಪ್ರವಾಸಿಗರು ಭೇಟಿ ನೀಡುತ್ತಾರೆ.

ಶಾಂತಿ ಮತ್ತು ಅಹಿಂಸೆಯ ಒಗ್ಗಟ್ಟಿನ ಸಂಕೇತವಾಗಿ ಈ ಸ್ಥಳವನ್ನು ಆಯ್ಕೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!