ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಚುನಾವಣಾ ಪ್ರಚಾರಕ್ಕಾಗಿ ಕಲಬುರಗಿ ಜಿಲ್ಲೆಗೆ ಆಗಮಿಸಿದ್ದ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಳಂದ ಪಟ್ಟಣದಿಂದ ಬೀದರ್ಗೆ ಹೋಗತ್ತಿದ್ದ ವೇಳೆ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿ ಮರಳಿ ಆಳಂದ ಪಟ್ಟಣಕ್ಕೆ ಬಂದು ಕಾದು ಹೋಗುವ ಸ್ಥಿತಿ ಎದರಾಯಿತು.
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಿಂದ ಟೇಕಾಫ್ ಆಗಿದ್ದ ಹೆಲಿಕಾಪ್ಟರ್, ಬೀದರ್ ಏರ್ಬೇಸ್ನಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಮಳೆ ಹಿನ್ನೆಲೆಯಲ್ಲಿ ಬೀದರ್ನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿದೆ. ಈ ಕಾರಣ ಟೇಕಾಫ್ ಆದ ಯೋಗಿ ಇದ್ದ ಹೆಲಿಕಾಪ್ಟರ್ ಕೇವಲ 10 ನಿಮಿಷದಲ್ಲೇ ಆಳಂದ ಪಟ್ಟಣಕ್ಕೆ ವಾಪಸ್ಸಾಗಿದೆ.
ಆಳಂದ ಪಟ್ಟಣದಲ್ಲಿ ಸುಮಾರು ಅರ್ಧಗಂಟೆಗಳ ಕಾಲ ಯೋಗಿ ಆದಿತ್ಯನಾಥ್ ಅವರು ಹೆಲಿಕಾಪ್ಟರ್ನಲ್ಲಿಯೇ ಕುಳಿತಿದ್ದರು. ಬೀದರ್ ಏರ್ಬೇಸ್ನಿಂದ ಲ್ಯಾಂಡಿಗ್ ಕ್ಲಿಯರನ್ಸ್ ಸಿಕ್ಕ ನಂತರ ಯೋಗಿ ಅವರು ಬೀದರ್ನ ಏರ್ಬೇಸ್ಗೆ ತೆರಳಿ ಅಲ್ಲಿಂದ ಲಕ್ನೋಗೆ ವಿಶೇಷ ವಿಮಾನದ ಮೂಲಕ ಪ್ರಯಾಣಿಸಿದರು.