ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರದ್ಧಾವಾಕರ್ ಹತ್ಯೆ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈಗ ಇಂತಹ ಘಟನೆಗಳು ಆಗಾಗ ನಡೆಯುತ್ತಿವೆ. ಅನುಮಾನ ಎಂಬ ಹುತ್ತ ಮನುಷ್ಯನ ತಲೆಯೇರಿ ಪ್ರಾಣವನ್ನೇ ಕಸಿಯುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಗೊಂಡಾದಲ್ಲಿ ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿದ ಭೀಕರ ಘಟನೆ ನಡೆದಿದೆ. 40 ವರ್ಷದ ಆರೋಪಿ ತನ್ನ ಪತ್ನಿಯೊಂದಿಗೆ ಜಗಳವಾಡಿದ್ದು, ಆಕೆಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಭಾನುವಾರ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.
ಕತ್ತು ಹಿಸುಕಿ ಕೊಂದ ಬಳಿಕ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಓಡಿ ಹೋಗಲು ಯತ್ನಿಸುತ್ತಿದ್ದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಶಿಪುರ ಗ್ರಾಮದಲ್ಲಿ ನಡೆದ ಈ ಘಟನೆ ಕುರಿತು ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಏತನ್ಮಧ್ಯೆ, ಆರೋಪಿಯು 2007 ರಲ್ಲಿ ಮೃತLನ್ನು ವಿವಾಹವಾದರು. ಅವರಿಗೆ 10 ಮತ್ತು ಐದು ವರ್ಷದ ಇಬ್ಬರು ಮಕ್ಕಳಿದ್ದಾರೆ. ಆರೋಪಿಯು ಆರು ತಿಂಗಳ ಹಿಂದೆ ನಗರದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದು, ನಿತ್ಯ 70 ಕಿಲೋಮೀಟರ್ ಸಂಚರಿಸುತ್ತಿದ್ದರು. ಅದಕ್ಕಾಗಿ ಬೇಗ ಮನೆಯಿಂದ ಹೊರಟು ತಡವಾಗಿ ಬರುತ್ತಿದ್ದ ಎಂದು ಮೃತಳ ಸಂಬಂಧಿಕರು ತಿಳಿಸಿದ್ದಾರೆ. ಈ ಸಮಯದಲ್ಲಿ ಹೆಂಡತಿ ಬೇರೆಯೊಬ್ಬನ ಜೊತೆ ಸಂಬಂಧ ಇಟ್ಟುಕೊಂಡಿದ್ದಳಂತೆ. ಈ ವಿಷಯ ತಿಳಿದು ಕೋಪಗೊಂಡ ಪತಿ ಆತನನ್ನು ಭೇಟಿಯಾಗದಂತೆ ಎಚ್ಚರಿಕೆ ನೀಡಿದರು. ಇಬ್ಬರ ನಡುವೆ ಈ ವಿಚಾರಕ್ಕೆ ಜಗಳ ನಡೆದು ಆಕೆಯನ್ನು ಕೊಂದಿದ್ದಾನೆ.