ಬಜೆಟ್ ಮಂಡನೆ ವೇಳೆ ಗದ್ದಲ: ‘ಕೈ’ ವಿರುದ್ಧ ಆರ್ ಅಶೋಕ್ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಟೀಕಿಸಿದ್ದು, ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರವನ್ನು ಟೀಕಿಸಲು ಬಜೆಟ್ ಬಳಸುತ್ತಾರೆಯೇ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಈ ವೇಳೆ ಗದ್ದಲದ ವಾತಾವರಣ ನಿರ್ಮಾಣವಾಗಿದೆ. ಸ್ಪೀಕರ್ ಯುಟಿ ಖಾದರ್ ಬೇಡಿಕೊಂಡರೂ ವಿರೋಧ ಪಕ್ಷದ ನಾಯಕರು ತಮ್ಮ ಆಕ್ರೋಶವನ್ನು ಕಡಿಮೆ ಮಾಡದೆ ಅಧಿವೇಶನದಲ್ಲಿ ಕೈ ವಿರುದ್ಧ ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!