ಆಸ್ತಿ ವಿಚಾರಕ್ಕೆ ಗಲಾಟೆ: ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುಂಡಹಳ್ಳಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಗನೊಬ್ಬ ತನ್ನ ತಂದೆಯನ್ನು ಕೊಂದಿರುವ ಅಮಾನುಷ ಘಟನೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ನಂಜಪ್ಪ (65) ಮಗನಿಂದಲೇ ಕೊಲೆಯಾದ ವ್ಯಕ್ತಿ. ಮಹಾದೇವ ತಂದೆಯನ್ನು ಕೊಲೆ ಮಾಡಿದ ಮಗ. ತಂದೆ, ಮಗಳ ಹೆಸರಿಗೆ ಆಸ್ತಿ ನೋಂದಣಿ ಮಾಡಿಸಿದ್ದಕ್ಕೆ ಮಗ ಕೋಪಕೊಂಡು ಈ ಕೃತ್ಯ ಮಾಡಿದ್ದಾನೆ ಎನ್ನಲಾಗಿದೆ.

ತನಗೆ ಯಾವುದೇ ಆಸ್ತಿ ನೀಡಿಲ್ಲ ಎಂದು ಸಿಟ್ಟಿಗೆದ್ದ ಮಗ. ಇಂದು ಬೆಳಗ್ಗೆ ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿ ಹತ್ಯೆಗೈದಿದ್ದಾನೆ. ಆ ವೇಳೆ ಅಡ್ಡ ಬಂದ ತಾಯಿ ಮಹದೇವಮ್ಮ ಗಂಭೀರ ಗಾಯಗೊಂಡಿದ್ದಾರೆ.

ಕೊಲೆ ಮಾಡಿದ ನಂತರ ಮಗ ತಪ್ಪಿಸಿಕೊಂಡಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!