ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿಗೆ ವಾಪಾಸಾಗಿದ್ದಾರೆ ಎನ್ನಲಾಗಿದೆ.
ನಿನ್ನೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾವನ್ನು ತಂಡ ಮಣಿಸಿದ್ದು, ಈಗಾಗಲೇ ಸರಣಿಯಲ್ಲಿ ಅಭೂತಪೂರ್ವ ಮುನ್ನಡೆ ಸಾಧಿಸಿದೆ.
ತಿರುವನಂತಪುರದಲ್ಲಿ ಮೂರನೇ ಪಂದ್ಯ ನಡೆಯಲಿದ್ದು, ತಂಡ ಕ್ಲೀನ್ ಸ್ವೀಪ್ ಮಾಡಲು ಉತ್ಸುಕವಾಗಿದೆ. ಈ ಬೆನ್ನಲ್ಲೇ ಕೋಚ್ಗೆ ಅನಾರೋಗ್ಯ ಕಾಡಿದ್ದು, ಕೊಲ್ಕತ್ತಾದಿಂದ ಬೆಂಗಳೂರಿನ ಮನೆಗೆ ವಾಪಾಸಾಗಿದ್ದಾರೆ ಎನ್ನಲಾಗಿದೆ.