ವಿಮಾನದಲ್ಲಿ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ: ಆರೋಪಿಗೆ ಸಿಗದ ಜಾಮೀನು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏರ್ ಇಂಡಿಯಾದಲ್ಲಿ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಸಂಬಂಧ ವ್ಯಕ್ತಿಯ ಜಾಮೀನು ಆದೇಶವನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಕಾಯ್ದಿರಿಸಿದೆ.
ಆರೋಪಿ ಶಂಕರ್ ಮಿಶ್ರಾ ಅವರ ಪರ ವಾದ ಮಂಡಿಸಿರುವ ಅಡ್ವೊಕೇಟ್ ಮನು ಶರ್ಮಾ, ಎಫ್‌ಐಆರ್ ನಲ್ಲಿ ದಾಖಲಾಗಿರುವ ಆರೋಪಗಳ ಪೈಕಿ ಒಂದು ಆರೋಪ ಮಾತ್ರ ಜಾಮೀನು ರಹಿತವಾಗಿದ್ದು, ಉಳಿದೆಲ್ಲವೂ ಜಾಮೀನು ನೀಡಬಹುದಾದ ಆರೋಪಗಳಾಗಿವೆ, ಆದ್ದರಿಂದ ಜಾಮೀನು ನೀಡಬಹುದೆಂದು ವಾದ ಮಂಡಿಸಿದ್ದರು.
ಆದರೆ ದೆಹಲಿ ಪೊಲೀಸರು ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಒಂದು ವೇಳೆ ಆರೋಪಿಗೆ ಜಾಮೀನು ನೀಡಿದರೆ, ಆತ ಸಂತ್ರಸ್ತ ವ್ಯಕ್ತಿಯ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಿದ್ದಾರೆ.
ಹೀಗಾಗಿ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!