ಪಾಕ್-ಭಾರತ ಕದನವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿಲ್ಲ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಯ ಸದಸ್ಯರಿಗೆ ಪಾಕಿಸ್ತಾನದಿಂದ ಯಾವುದೇ ಪರಮಾಣು ದಾಳಿಯ ಸೂಚನೆಯಿಲ್ಲ. ಕದನವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆಯನ್ನೂ ವಹಿಸಿಲ್ಲ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದವನ್ನು ಮಧ್ಯಸ್ಥಿಕೆ ವಹಿಸುವ ಮತ್ತು ಪರಮಾಣು ಯುದ್ಧವನ್ನು ತಪ್ಪಿಸುವ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಯನ್ನು ಈ ಮೂಲಕ ಅವರು ತಳ್ಳಿ ಹಾಕಿದ್ದಾರೆ.

ಇಸ್ಲಾಮಾಬಾದ್‌ನಿಂದ ಅದರಲ್ಲೂ ವಿಶೇಷವಾಗಿ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಿಂದ (ಡಿಜಿಎಂಒ) ಕದನ ವಿರಾಮದ ಮನವಿ ಬಂದಿದೆ ಎಂದು ಹೇಳಿದರು.

ಅವರು ದೆಹಲಿಯಲ್ಲಿರುವ ಭಾರತದ ಡಿಜಿಎಂಒ ಅವರನ್ನು ಸಂಪರ್ಕಿಸಿದ್ದರು. ‘ಆಪರೇಷನ್ ಸಿಂದೂರ್’ ಸಮಯದಲ್ಲಿ ಅಮೆರಿಕದ ಯಾವುದೇ ಹಸ್ತಕ್ಷೇಪ ಇರಲಿಲ್ಲ ಎಂದು ಸಮಿತಿಗೆ ಅವರು ತಿಳಿಸಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಘಟನೆಗೆ ಪ್ರತಿಕ್ರಿಯೆಯಾಗಿ ಭಾರತವು ಮೇ 7ರ ಮುಂಜಾನೆ ಭಯೋತ್ಪಾದಕ ಮೂಲಸೌಕರ್ಯದ ಮೇಲೆ ‘ಆಪರೇಷನ್ ಸಿಂದೂರ್’ ಅಡಿಯಲ್ಲಿ ನಿಖರವಾದ ದಾಳಿಗಳನ್ನು ನಡೆಸಿತು. ನಂತರ ಪಾಕಿಸ್ತಾನವು ಮೇ 8, 9 ಮತ್ತು 10ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಭಾರತೀಯ ಪಡೆಗಳು ಹಲವಾರು ಪಾಕಿಸ್ತಾನಿ ಸೇನಾ ನೆಲೆಗಳ ಮೇಲೆ ಉಗ್ರ ಪ್ರತಿದಾಳಿ ನಡೆಸಿದವು. ನಂತರ, ಮೇ 10ರಂದು ಕದನ ವಿರಾಮ ಘೋಷಿಸಲಾಯಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!