ಯು.ಟಿ.ಖಾದರ್ ನೂತನ ಸ್ಪೀಕರ್ ಆಗಿ ಆಯ್ಕೆ: ಸಿದ್ದರಾಮಯ್ಯ, ಬೊಮ್ಮಾಯಿ ಅಭಿನಂದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಖಾದರ್ ಹೆಸರು ಪ್ರಸ್ತಾವನೆ ಮಾಡಿದ್ದು, ಸಿಎಂ ಪ್ರಸ್ತಾವವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅನುಮೋದಿಸಿದ್ದಾರೆ.

ಸಿದ್ದರಾಮಯ್ಯ, ಬೊಮ್ಮಾಯಿ ಅಭನಂದನೆ

ಇನ್ನೂ ಸರ್ವಾನುಮತದಿಂದ ಸ್ಪೀಕರ್‌ ಸ್ಥಾನಕ್ಕೆ ಆಯ್ಕೆಯಾದ ಯು.ಟಿ.ಖಾದರ್‌ ಅವರಿಗೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಿಂದ ಸಭಾಧ್ಯಕ್ಷರಾದ ಎರಡನೇ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಖಾದರ್‌ ಪಾತ್ರರಾಗಿದ್ದಾರೆ. ಜೊತೆಗೆ ಮುಸ್ಲಿಂ ಸಮುದಾಯದಿಂದ ಸ್ಪೀಕರ್‌ ಸ್ಥಾನಕ್ಕೆ ಏರಿದ ಮೊದಲ ವ್ಯಕ್ತಿ ಕೂಡ ಇವರೇ. ಈ ಹಿಂದೆ ಬೆಳ್ತಂಗಡಿ ಕ್ಷೇತ್ರದಿಂದ ಬಿ. ವೈಕುಂಠ ಬಾಳಿಗಾ ಎರಡು ಬಾರಿ ಸಭಾಧ್ಯಕ್ಷರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!