ಗೋಶಾಲೆಗೆ ಬೆಂಕಿ, 38 ಹಸುಗಳ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗೋಶಾಲೆಗೆ ಬೆಂಕಿ ಬಿದ್ದು 38ಗೋವುಗಳು ಸಜೀವ ದಹನವಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಇಂದಿರಾಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಕಣವಣಿ ಗ್ರಾಮದ ಶ್ರೀಕೃಷ್ಣ ಗೋಶಾಲೆಯಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಗೋಶಾಲೆ ಬಳಿಯ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದು ಹತ್ತಿರದಲ್ಲಿದ್ದ ಗೋಶಾಲೆವರೆಗೂ ಹರಡಿ ಹಸು ಹಾಗೂ ಕರುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ದೂರಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಗಾಜಿಯಾಬಾದ್ ಪೊಲೀಸ್ ಮುಖ್ಯಸ್ಥ ಮುನಿರಾಜ್ ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯನ್ನು ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ. ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ, 15 ರಿಂದ 20 ಜಾನುವಾರುಗಳು ಬೆಂಕಿಗೆ ಸಿಲುಕಿ ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದೆ. ಆದರೆ, ಸಂಪೂರ್ಣ ತನಿಖೆಯ ನಂತರ ಎಷ್ಟು ಹಸುಗಳು ಬಲಿಯಾಗಿವೆ ಹಾಗೂ ಬೆಂಕಿ ಹೇಗೆ ವ್ಯಾಪಿಸಿದೆ ಎಂಬುದು ಸ್ಪಷ್ಟವಾಗಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!