ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಇಂದು ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆ ಕರೆದಿದೆ. ಚುನಾವಣಾ ಕಾರ್ಯತಂತ್ರ ಮತ್ತು ಪ್ರಣಾಳಿಕೆ ಬಗ್ಗೆ ಚರ್ಚಿಸಲು ಬಿಜೆಪಿ ನಾಯಕರು ಸಭೆ ನಡೆಸಲಿದ್ದು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಉತ್ತರಪ್ರದೇಶದಲ್ಲಿ ಒಟ್ಟು ಏಳು ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎರಡು ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇನ್ನೂ 8 ಕ್ಷೇತ್ರಗಳಿಗೆ ಆಯ್ಕೆ ಮಾಡಬೇಕಿದೆ. ಉಳಿದ ಐದು ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಾಕಿ ಇದೆ. ಈ ಎಲ್ಲದರ ಬಗ್ಗೆ ಇಂದು ಚರ್ಚೆ ನಡೆಯುವ ಸಾಧ್ಯತೆ ಇದೆ. ಕಳೆದ ವಾರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮೂರು ಮ್ಯಾರಥಾನ್ ಸಭೆ ನಡೆದಿದೆ.