ಉತ್ತರಾಖಂಡದ 36 ಸೇತುವೆಗಳು ಸಂಚಾರಕ್ಕೆ ಅನರ್ಹ: ಪರಿಶೋಧನಾ ವರದಿಯಲ್ಲಿ ಬಹಿರಂಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಸೂಚನೆ ಮೇರೆಗೆ ರಾಜ್ಯದ ಐದು ವಲಯಗಳಲ್ಲಿ ನಡೆಸಿದ ಸುರಕ್ಷತಾ ಲೆಕ್ಕಪರಿಶೋಧನೆಯಲ್ಲಿ ಉತ್ತರಾಖಂಡದ 36 ಸೇತುವೆಗಳು ಸಂಚಾರಕ್ಕೆ ಅನರ್ಹವೆಂದು ಕಂಡುಬಂದಿದೆ. ರಾಜ್ಯದಲ್ಲಿರುವ 3,262 ಸೇತುವೆಗಳ ಪೈಕಿ 2618 ಸೇತುವೆಗಳ ಸುರಕ್ಷತಾ ಲೆಕ್ಕ ಪರಿಶೋಧನಾ ವರದಿಯನ್ನು ಪಿಡಬ್ಲ್ಯುಡಿ ಇಲಾಖೆ ಸರ್ಕಾರಕ್ಕೆ ಹಸ್ತಾಂತರಿಸಿದೆ.

ಸುರಕ್ಷತಾ ಆಡಿಟ್ ವರದಿಯನ್ನು ಸರ್ಕಾರ ಸ್ವೀಕರಿಸಿರುವುದಾಗಿ PWD ಇಲಾಖೆಯ ಪ್ರಧಾನ ಕಾರ್ಯದರ್ಶಿ ಆರ್‌ಕೆ ಸುಧಾಂಶು ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಕಾಲಮಿತಿಯಲ್ಲಿ ಹೊಸ ಸೇತುವೆಗಳನ್ನು ನಿರ್ಮಿಸಲು ಸೇತುವೆಯನ್ನು ಸ್ಥಾಪಿಸಲು ಸರ್ಕಾರದಿಂದ ಸೂಚನೆಗಳನ್ನು ನೀಡಲಾಗಿದೆ, ಅದರಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಹಳೇ ಹಾಗೂ ಶಿಥಿಲಗೊಂಡಿರುವ ಸೇತುವೆಗಳನ್ನು ಹೊಸದಾಗಿ ನಿರ್ಮಿಸಲು ಸರಕಾರ ಮುಂದಾಗಿದ್ದು, ಮೂರು ವಾರದೊಳಗೆ ಆಡಿಟ್ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೊಮೋರ್ಬಿ ತೂಗುಸೇತುವೆ ಕುಸಿತದ ಹಿನ್ನೆಲೆಯಲ್ಲಿ ನವೆಂಬರ್ 3 ರಂದು ನೀಡಲಾದ ಸಿಎಂ ನಿರ್ದೇಶನದ ಮೇರೆಗೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಸುರಕ್ಷತಾ ಲೆಕ್ಕಪರಿಶೋಧನೆ ನಡೆಸಿತು.

ಅಕ್ಟೋಬರ್ 30 ರಂದು ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ಕೇಬಲ್ ತೂಗು ಸೇತುವೆಯ ಕುಸಿತದಲ್ಲಿ ಕನಿಷ್ಠ 135 ಜನರು ಸಾವನ್ನಪ್ಪಿ,  100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 143 ವರ್ಷಗಳಷ್ಟು ಹಳೆಯದಾದ ಮೊರ್ಬಿ ಸೇತುವೆ ಕುಸಿತದ ಬಳಿಕ ಈ ಸುರಕ್ಷತಾ ಲೆಕ್ಕ ಪರಿಶೋಧನೆ ಕಾರ್ಯ ಕೈಗೊಳ್ಳಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!