ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ನಿವಾಸದಲ್ಲಿ ಭಾನುವಾರ ಸಂಜೆ ರಾಜ್ಯ ಸಚಿವ ಸಂಪುಟದ ಪ್ರಮುಖ ಸಭೆ ನಡೆದಿದ್ದು, ಈ ವೇಳೆ ಯುಸಿಸಿ ವರದಿಗೆ ಸಂಪುಟ ಅನುಮೋದನೆ ನೀಡಿದೆ.
ಕ್ಯಾಬಿನೆಟ್ ಸಭೆಯಲ್ಲಿ ವರದಿಯ ಅನುಮೋದನೆಯ ನಂತರ, ಯುಸಿಸಿ ಮಸೂದೆಯನ್ನು ಫೆಬ್ರವರಿ 6 ರಂದು ವಿಧಾನಸಭೆಯಲ್ಲಿ ಮಂಡಿಸಲಾಗುವುದು.
ಏಕರೂಪ ನಾಗರಿಕ ಸಂಹಿತೆಯ ಅಂತಿಮ ಕರಡನ್ನು ಉತ್ತರಾಖಂಡ ಮುಖ್ಯಮಂತ್ರಿ ಅವರಿಗೆ ತಜ್ಞರ ಸಮಿತಿ ಈಚೆಗೆ ಸಲ್ಲಿಸಿತ್ತು.