ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರಾಖಂಡ್ನ ನೂತನ ಮುಖ್ಯಮಂತ್ರಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಂಬಂಧ ರಾಜ್ಯ ಬಿಜೆಪಿ ಶಾಸಕರು ಡೆಹ್ರಾಡೂನ್ನಲ್ಲಿ ಸೋಮವಾರ ಸಭೆ ನಡೆಸಲಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉತ್ತರಾಖಂಡ್ನ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಭಾಗಿಯಾಗಲಿದ್ದಾರೆ ಮೂಲಗಳು ತಿಳಿಸಿವೆ.
ಇಂದು ಆಯ್ಕೆಯಾಗುವ ಮುಖ್ಯಮಂತ್ರಿ ಅಭ್ಯರ್ಥಿ ಮಂಗಳವಾರ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ಮಾಹಿತಿ ನೀಡಿವೆ. ಬಿಜೆಪಿ ಉತ್ತರಾಖಂಡ್ ನಲ್ಲಿ ಜಯಭೇರಿ ಭಾರಿಸಲು ಸಾಕಷ್ಟು ಶ್ರಮಿಸಿರುವ ಹಿಂದಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಾವು ಸ್ಪರ್ಧಿಸಿದ್ದ ಖತಮಿ ಕ್ಷೇತ್ರದಲ್ಲಿ ಸೋತಿದ್ದಾರೆ. ಹಾಗಿದ್ದರೂ ಅವರೇ ಮತ್ತೊಂದು ಅವಧಿಗೆ ಮುಖ್ಯಮಂತ್ರಿ ಆಗಲಿ ಎಂದು ಪಕ್ಷದ ಒಂದು ವರ್ಗದ ಶಾಸಕರು ಅಭಿಪ್ರಾಯ ಪಟ್ಟಿದ್ದಾರೆ.
ಉತ್ತರಾಖಂಡ್ ವಿಧಾನಸಭೆಗೆ ಆಯ್ಕೆಯಾಗಿರುವ ನೂತನ ಶಾಸಕರು ಇಂದು ಬೆಳಗ್ಗೆ 11ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅದಾದ ಬಳಿಕ ಸಭೆ ಆಯೋಜನೆಯಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ