ಉತ್ತರಾಖಂಡ ಹನುಮ ಜಯಂತಿ ಮೆರವಣಿಗೆ ಮೇಲೆ ಮುಸ್ಲಿಮರಿಂದ ಕಲ್ಲು ತೂರಾಟ, ಗುಂಡಿನ ದಾಳಿ; 10 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರಾಖಂಡದ ರೂರ್ಕಿಯಲ್ಲಿ ಶನಿವಾರ ಹನುಮ ಜಯಂತಿ ಶೋಭಾಯಾತ್ರೆ ನಡೆಸುತ್ತಿದ್ದ ಹಿಂದೂಗಳ ಮೇಲೆ ಮುಸ್ಲಿಂ ಗುಂಪೊಂದು ಕಲ್ಲು ತೂರಾಟ ಹಾಗೂ ಗುಂಡಿನ ದಾಳಿ ನಡೆಸಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಜಿಲ್ಲೆಯ ಹರಿದ್ವಾರದ ಭಗವಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಜರಂಗದಳ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಹನುಮ ಜಯಂತಿಯಂದು ಶೋಭಾಯಾತ್ರೆ ಮೆರವಣಿಗೆ ನಡೆಸುತ್ತಿದ್ದರು. ಮೆರವಣಿಗೆಯು ದಾದಾಪಟ್ಟಿ ಗ್ರಾಮದ ಮೂಲಕ ಹಾದುಹೋಗುವಾಗ ಮುಸ್ಲಿಂ ದುಷ್ಕರ್ಮಿಗಳ ಗುಂಪು ಹತ್ತಿರದ ಮನೆಗಳಿಂದ  ಕಲ್ಲು ತೂರಾಟ ನಡೆಸಿತು.

ಗಾಯಗೊಂಡವರಲ್ಲಿ ಮಂಡ್ವಾರ್ ಪೊಲೀಸ್ ಠಾಣೆಯ ಉಸ್ತುವಾರಿ ಆಶಿಶ್ ನೇಗಿ ಸೇರಿದ್ದಾರೆ. ಕಲ್ಲು ತೂರಾಟ ತ್ರೀವ್ರವಾಗಿ ನಡೆದಿದ್ದು, ಘಟನೆಯ ಕುರಿತು ಸ್ಥಳೀಯ ಪೊಲೀಸರಿಗೆ ತಕ್ಷಣವೇ ಮಾಹಿತಿ ನೀಡಲಾಯಿತು. ಭಗವಾನ್‌ಪುರ ಪೊಲೀಸ್ ಠಾಣೆ ಪ್ರಭಾರಿ ಪಿ.ಡಿ.ಭಟ್ ಹೆಚ್ಚುವರಿ ಪೊಲೀಸ್ ಪಡೆಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಮನೆಗಳ ಮೇಲೆ ಅವಿತುಕೊಂಡಿದ್ದ ದುಕ್ಷಕರ್ಮಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಗ್ರಾಮಾಂತರ ಪ್ರಮೇಂದ್ರ ದೋಬಾಲ್ ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!